Connect with us

    KARNATAKA

    ಬೆಂಗಳೂರು – ಬಾಯ್ಲರ್ ಸ್ಪೋಟ ಇಬ್ಬರ ಸಾವು ಮೂವರು ಗಂಭೀರ

    ಬೆಂಗಳೂರು: ಆಹಾರ ಪದಾರ್ಥ ತಯಾರಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿ ನಡೆದಿದೆ.


    ಈ ಘಟನೆಯಲ್ಲಿ ಮೃತರಾದವರನ್ನು ಸೌರಭ್ ಮತ್ತು ಮನೀಶ್ ಎಂದು ಗುರುತಿಸಲಾಗಿದ್ದು. ಇವರು ಬಿಹಾರ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.


    ಇಂದು ಮಧ್ಯಾಹ್ನ 1.30ರ ಸುಮಾರಿಗೆ ವಿಜಯ್ ಮೆಹ್ತಾ ಒಡೆತನದ ಸ್ನ್ಯಾಕ್ಸ್ ತಿಂಡಿ ಪದಾರ್ಥ ತಯಾರಿ ಮಾಡುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಫ್ಯಾಕ್ಟರಿ ಒಳಗಡೆ ಒಟ್ಟು 7 ಮಂದಿ ಕೆಲಸ ಮಾಡುತ್ತಿದ್ದರು. ಮಾಗಡಿ ರೋಡ್ ನಲ್ಲಿ ಇದ್ದ ಫ್ಯಾಕ್ಟರಿಗೆ ಈ ಹಿಂದೆ ಬೆಂಕಿ ಅವಘಡ ಸಂಭವಿಸಿತ್ತು. ಅಲ್ಲಿಂದ ಇಲ್ಲಿಗೆ ಫ್ಯಾಕ್ಟರಿಯನ್ನ ಶಿಫ್ಟ್ ಮಾಡಲಾಗಿತ್ತು. ಇಲ್ಲಿಗೆ ಶಿಪ್ಟ್ ಆಗಿ ಮೂರು ತಿಂಗಳಾಗಿದೆ. ಚಿಪ್ಸ್, ಚಕ್ಕುಲಿ, ಮೀಕ್ಷರ್ ಸೇರಿದಂತೆ ಬೇಕರಿ ಉತ್ಪನ್ನಗಳನ್ನ ತಯಾರಿಸುತ್ತಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply