Connect with us

    DAKSHINA KANNADA

    ನದಿಗೆ ಬಿದ್ದು ವೇದಾದ್ಯಯನ ಕಲಿಯುತ್ತಿದ್ದ ಬಾಲಕ ಸಾವು

    ಸುಳ್ಯ ಮಾರ್ಚ್ 8:ವೇದಾದ್ಯಯನ ಕಲಿಯುತ್ತಿದ್ದ ಬಾಲಕನೊಬ್ಬ ಕಾಲುಜಾರಿ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಬಾಲಕನನ್ನು ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ ಭಟ್ (18) ಎಂದು ಗುರುತಿಸಲಾಗಿದೆ.


    ನಿನ್ನೆ ಸಂಜೆ ವೇದಾಧ್ಯಯನ ತರಗತಿಯ 7 ಜನ ವಿದ್ಯಾರ್ಥಿಗಳು ಹಾಗೂ ಉದನೇಶ್ವರ ಅವರು ಅರಂಬೂರಿನ ‌ಪಯಸ್ವಿನಿ ನದಿಗೆ ಸ್ನಾನಕ್ಕಿಳಿದಿದ್ದರು. ಆ ವೇಳೆ ಉದನೇಶ್ವರ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಆದರೆ ಇದು ಅವರ ಜೊತೆಗೆ ಇದ್ದವರ ಗಮನಕ್ಕೆ ಬಂದಿರಲಿಲ್ಲ.

    ಉದನೇಶ್ವರ ಅವರು ಕಾಣದೇ ಇದ್ದರಿಂದ ಆತ ಆಶ್ರಮಕ್ಕೆ ತೆರಳಿರಬೇಕೆಂದು ಭಾವಿಸಿದ್ದರು. ಉದನೇಶ್ವರ ಅವರ ಚಪ್ಪಲಿ ನದಿಯ ಪಕ್ಕದಲ್ಲಿದ್ದುದರಿಂದ ಅನುಮಾನಗೊಂಡು ಆಶ್ರಮದ ಹಿರಿಯರಿಗೆ ತಿಳಿಸಿದರು.ಬಳಿಕ ಸ್ಥಳೀಯರು ಸೇರಿ ನದಿಯಲ್ಲಿ ಹುಡುಕಾಡಿದಾಗ ರಾತ್ರಿ ವೇಳೆ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply