UDUPI
ಮೀನಿನ ಬಲೆ ಎತ್ತಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು…!!
ಉಡುಪಿ ಜುಲೈ 3: ರಾತ್ರಿ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬ್ರಹ್ಮಾವರದ ಬಾರ್ಕೂರಿನ ಹಾಲೆಕೊಡಿ ನದಿಯಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21) ಎಂದು ಗುರುತಿಸಲಾಗಿದೆ.
ಈ ಯುವಕರಿಬ್ಬರು ಬಾರ್ಕೂರು ಸಂತೆ ಮಾರುಕಟ್ಟೆ ಸಮೀಪ ಹಾಲೆಕೊಡಿ ನದಿಯಲ್ಲಿ ನಿನ್ನೆ ರಾತ್ರಿ ಮೀನು ಹಿಡಿಯಲು ಬಲೆ ಕಟ್ಟಿ ಬಂದಿದ್ದರು. ಇಂದು ಬೆಳಿಗ್ಗೆ ಬಲೆ ಎಳೆಯಲು ಹೋದ ಸಂದರ್ಭ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇವರು ಬಲೆ ಕಟ್ಟಿದ ಪ್ರದೇಶದ ತುಂಬಾ ಆಳವಿದ್ದು, ಹಾಗಾಗಿ ಮೇಲೆಳಲಾಗದೇ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ತಕ್ಷಣ ಸುದ್ಧಿ ತಿಳಿದ ಸ್ಥಳೀಯರು, ಮೀನುಗಾರರು ಸ್ಥಳಕ್ಕೆ ಧಾವಿಸಿದ್ದು, ಬ್ರಹ್ಮಾವರ ಠಾಣಾ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಇಬ್ಬರ ಶವವನ್ನು ಮೇಲೆತ್ತಲಾಗಿದೆ. ಮೃತ ಹರ್ಷ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ತಿಕ್ ಕೊನೆಯ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Facebook Comments
You may like
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
ಸಹಪಾಠಿಯನ್ನು ನಂಬಿ ಹೋದ ವಿದ್ಯಾರ್ಥಿನಿಯ ದುರಂತ ಅಂತ್ಯ..!
ವಿರಾಜಪೇಟೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಸಾವು
You must be logged in to post a comment Login