LATEST NEWS
ಬ್ರಹ್ಮಾವರ – ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ ಎಪ್ರಿಲ್ 01: ಎಲೆಕ್ಟ್ರಿಕ್ ಸ್ಕೂಟರ್ ಒಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಏರಿಕೆಯಲ್ಲೇ ಇದ್ದು, ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದೇ ಇರುವುದು ವಿಪರ್ಯಾಸವಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login