Connect with us

    LATEST NEWS

    ಬ್ರಹ್ಮಾವರ – ಏಕಾಂಗಿಯಾಗಿ ವಾಸಿಸುತ್ತಿದ್ದ ಯುವಕನ ಕೊಲೆ..!

    ಉಡುಪಿ, ಮಾರ್ಚ್​​ 03: ಏಕಾಂಗಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಶೂಟ್ ಮಾಡಿ ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ.


    ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9:30ರ ವೇಳೆಗೆ  ಕೃಷ್ಣ ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಕ್ಕ ಪಕ್ಕದ ನಿವಾಸಿಗಳಿಗೆ ಫೈರಿಂಗ್ ಶಬ್ದ ಕೇಳಿದೆ. ಆದರೆ ಅವರು ಪಟಾಕಿಯ ಶಬ್ದವೆಂದು ಸುಮ್ಮನಾಗಿದ್ದಾರಂತೆ. ಇನ್ನು ಇಂದು ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ.

    ಕೃಷ್ಣ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದನು ಎಂದು ನೆರೆಹೊರೆಯವರು ಮಾಹಿತಿ ನೀಡಿದ್ದಾರೆ. ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದನು. ಶನಿವಾರ ರಾತ್ರಿ ಊಟ ಮಾಡುತ್ತಿರುವ ವೇಳೆ ಶೂಟೌಟ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ನೀಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply