LATEST NEWS
ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಬಲವಂತ : ಸರ್ಕಾರಿ ಶಾಲೆ ವಿರುದ್ದ ದೂರು..!
ಶಿವಮೊಗ್ಗ : ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯರು ಮತ್ತು ಅವರ ಸಹಾಯಕರು ತಮ್ಮ ಮಗಳಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದು, ಮಗಳು ಮಾನಸಿಕ ಯಾತನೆ ಅನುಭವಿಸುತ್ತಿದ್ದಾಳೆ ಎಂದು ಎಂದು ಬ್ರಾಹ್ಮಣ ವಿದ್ಯಾರ್ಥಿನಿಯ ತಂದೆ ಆರೋಪಿದ್ದಾರೆ.
ಈ ಬಗ್ಗೆ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯರು ಹಾಗೂ ಅವರ ಸಹಾಯಕರ ಮೇಲೆಶಿಕ್ಷಣ ಮಂಡಳಿಗೆ ದೂರು ನೀಡಿದ್ದಾರೆ. ಶಿವಮೊಗ್ಗ ಸಮೀಪದ ಹೊಸನಗರ ತಾಲೂಕಿನ ಅಮೃತ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬ್ರಾಹ್ಮಣ ಸಮುದಾಯಕ್ಕೆ ಸೇರಿದ ತನ್ನ ಮಗಳಿಗೆ ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ಸೇವಿಸುವಂತೆ ಮಾಡಲಾಗಿತ್ತು ಎಂದು ಶ್ರೀಕಾಂತ್ ದೂರಿನಲ್ಲಿ ತಿಳಿಸಿದ್ದಾರೆ.ಅವರು ಸಸ್ಯಾಹಾರಿಗಳಾಗಿರುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಮತ್ತು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹಾಯಕ ಶಿಕ್ಷಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಧಾನ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಸ್ಥಳೀಯ ಶಾಸಕರಿಗೂ ದೂರು ಸಲ್ಲಿಸಲಾಗಿದೆ.
ಶಾಲಾ ಆವರಣದಲ್ಲಿ ಮೊಟ್ಟೆ ವಿತರಣೆಯನ್ನು ಧಾರ್ಮಿಕ ಮಠಾಧೀಶರು ವಿರೋಧಿಸಿದ್ದರು.ಈ ಬೆಳವಣಿಗೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
You must be logged in to post a comment Login