Connect with us

LATEST NEWS

ಮೀತಿ ಮೀರಿ ಆದಾಯ ಸಂಪಾದನೆ ಮಂಗಳೂರು ಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು ಅಕ್ಟೋಬರ್ 29: ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.


ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ. ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.


ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *