Connect with us

    KARNATAKA

    ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು….!!

    ಚಿತ್ರದುರ್ಗ ಡಿಸೆಂಬರ್ 8: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಹುಡುಗಿ ಕೈ ಅಡ್ಡ ಇಟ್ಟು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.


    ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಮಂಜುನಾಥ್ ಮತ್ತು ಐಶ್ವರ್ಯ ನಡುವೆ ವಿವಾಹ ನಿಶ್ಚಿಯವಾಗಿತ್ತು. ಅದರಂತೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಗೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಇನ್ನೇನು ವರ ತಾಳಿ ಕಟ್ಟಿದರೆ ಮದುವೆಯೇ ಮುಗಿದು ಹೋಗಿತ್ತು. ಆದ್ರೆ, ವಧು ಐಶ್ವರ್ಯ, ಕೊನೆ ಕ್ಷಣದಲ್ಲಿ ಈ ಮದುವೆಯೇ ಬೇಡ ಎಂದು ತಾಳಿ ಕಟ್ಟಿಸಿಕೊಳ್ಳು ನಿರಾಕರಿಸಿದ್ದಾಳೆ.

    ಮಂಜುನಾಥ್ ತಾಳಿ ಕಟ್ಟಲು ಎದ್ದು ನಿಂತರೇ ಬೇಡ ಎಂದು ಕೈ ಅಡ್ಡ ಹಿಡಿದಿದ್ದಾಳೆ. ಈ ವೇಳೆ ಸಂಬಂಧಿಕರು ಐಶ್ವರ್ಯಳನ್ನು ಮನವೊಲಿಸಿದ್ದಾರೆ. ಎಷ್ಟೇ ಹರಸಾಹಸ ಪಟ್ಟರೂ ಸಹ ಬಗ್ಗದ ಐಶ್ವರ್ಯ ತಾಳಿ ಕಟ್ಟಿಸಿಕೊಳ್ಳಲು ಒಪ್ಪಲೇ ಇಲ್ಲ. ಯುವತಿ ನಡೆಗೆ ಯುವಕನ ಸಂಬಂಧಿಕರ ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ಈ ವೇಳೆ ಯುವತಿ ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ಉಂಟಾಗಿ ಕೊನೆಗೆ ಅಂತಿಮವಾಗಿ ಈ ಮದುವೆಯೇ ರದ್ದುಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply