Connect with us

    LATEST NEWS

    ಕಾಮನ್ ವೆಲ್ತ್ ಗೆಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಂದಾಪುರದ ಗುರುರಾಜ ಪೂಜಾರಿ

    ಕುಂದಾಪುರ ಜುಲೈ 30: ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕುಂದಾಪುರದ ಗುರುರಾಜ ಪೂಜಾರಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆಯನ್ನು ಎತ್ತರಕ್ಕೇರಿಸಿದ್ದಾರೆ.


    ಗುರುರಾಜ ಪೂಜಾರಿಯವರು ಒಟ್ಟು 269 ಕೆಜಿ ಎತ್ತುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಗುರುರಾಜ ಪೂಜಾರಿ ಅವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಕೂಡ ಗುರುರಾಜ ಗೆ ಅಭಿನಂದನೆ ಸಲ್ಲಿಸಿದ್ದಾರೆ. 55 ಕೆಜಿ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಅವರು ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಲಭ್ಯವಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply