Connect with us

DAKSHINA KANNADA

ರೈಲ್ವೇ ಟ್ರಾಕ್ ನಲ್ಲಿ ಅಣ್ಣನನ್ನು ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ

ಪುತ್ತೂರು ಜೂನ್ 08: ರೈಲ್ವೆ ಟ್ರ್ಯಾಕ್ ಮೇಲೆ ಅಣ್ಣನನ್ನು ತಮ್ಮ ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಕೋಡಿಂಬಾಳದ ಕೋರಿಯಾರ್ ಬಳಿ ನಡೆದಿದೆ. ಸುಟ್ಟು ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಗಾಯಗೊಂಡ ವ್ಯಕ್ತಿಯನ್ನು ಹನುಮಪ್ಪ ಎಂದು ಗುರುತಿಸಲಾಗಿದ್ದು, ಪೆಟ್ರೋಲ್ ಸುರಿದ ವ್ಯಕ್ತಿಯನ್ನು ಆತನ ತಮ್ಮ ನಿಂಗಪ್ಪ ಎಂದು ಗುರುತಿಸಲಾಗಿದೆ. ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಜೂನ್ 8 ರ ಮಧ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗ ದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು.

ರೈಲು ಹೋದ ಬಳಿಕ ಸುಮಾರು 500 ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಹನುಮಪ್ಪನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ. ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ ಎನ್ನಲಾಗಿದೆ.ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ನಿಂಗಪ್ಪನನ್ನು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ. ಈ ಘಟನೆಗೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *