Connect with us

    LATEST NEWS

    ಯಡಿಯೂರಪ್ಪ ಹಗಲುಗನಸು ಕಾಣುತ್ತಿದ್ದಾರೆ – ಜಮೀರ್ ಅಹಮ್ಮದ್

    ಯಡಿಯೂರಪ್ಪ ಹಗಲುಗನಸು ಕಾಣುತ್ತಿದ್ದಾರೆ – ಜಮೀರ್ ಅಹಮ್ಮದ್

    ಉಡುಪಿ ನವೆಂಬರ್ 17: ಕೆಟ್ಟ ಘಳಿಗೆ ಬಂದಾಗ ಯು ಟರ್ನ್ ಹೊಡೆಯುವುದು ಬಿಜೆಪಿಯವರಿಗೆ ಮಾಮೂಲಿ, ಬಿಜೆಪಿಯವರು ಚೆನ್ನಾಗಿದ್ದರೆ ಮಾತ್ರ ಜೊತೆಗಿರುತ್ತಾರೆ. ಹೆಚ್ಚು ಕಡಿಮೆ ಆದರೆ ಮಾತ್ರ ಬಿಟ್ಟು ಬಿಡುತ್ತಾರೆ. ಕೆಟ್ಟ ಗಳಿಗೆ ಬಂದಾಗ ಹಿಂದೇಟು ಹೊಡಿಯೋದು ಬಿಜೆಪಿಗೆ ಮಾಮೂಲು ಎಂದು ವಕ್ಫ್‌, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.

    ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.​ಯಡಿಯೂರಪ್ಪ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನಾರ್ಧನ ರೆಡ್ಡಿ ಬಿಜೆಪಿಯಲ್ಲೇ ಇದ್ದಾರೆ. ಜನಾರ್ದನ ರೆಡ್ಡಿ ಅವರು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ.

    ಬಿ ಎಸ್ ಯಡಿಯೂರಪ್ಪ ಕಳೆದ ಮೂರ್ನಾಲ್ಕು ತಿಂಗಳಿಂದ ಬಿಎಸ್​ವೈ ನಿದ್ದೆ ಮಾಡಿಲ್ಲ, ಮುಖ್ಯಮಂತ್ರಿ ಆದೆ ಎಂದು ಬಿಎಸ್​ವೈ ಕನಸು ಕಾಣುತ್ತಾರಂತೆ. ಕನಸು ಕಾಣುವುದು ತಪ್ಪಲ್ಲ. ಆದರೆ, ಎಲ್ಲರೂ ರಾತ್ರಿ ಕನಸು ಕಂಡರೆ ಬಿಎಸ್‌ವೈ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ರಾಮಮಂದಿರ ಕಟ್ಟಲು ಮುಸಲ್ಮಾನರ ವಿರೋಧ ಇಲ್ಲ. ಲೋಕಸಭಾ ಚುನಾವಣೆ ಬಂದರೆ ಬಿಜೆಪಿಯವರಿಗೆ ರಾಮಮಂದಿರ ನೆನಪಾಗುತ್ತದೆ. ನಾಲ್ಕೂವರೆ ವರ್ಷದಲ್ಲಿ ರಾಮಮಂದಿರ ಜ್ಞಾಪಕಕ್ಕೆ ಬಂದಿಲ್ಲ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply