Connect with us

KARNATAKA

ಸಂಜೆ 5 ಗಂಟೆ ರಾಜ್ಯವನ್ನುದ್ದೇಶಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಷಣ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, ಅಲ್ಲದೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆಯ ಕೊನೆಯ ದಿನಗಳು ಸಮೀಪಿಸುತ್ತಿದ್ದಂತೆ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣ ಮೂಲಕ ಯಡಿಯೂರಪ್ಪ ರಾಜ್ಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.


ಯೂಟ್ಯೂಬ್ ಮತ್ತು ಫೇಸ್‌ಬುಕ್‌ ಲೈವ್ ಮುಖಾಂತರ ಕಾಣಿಸಿಕೊಳ್ಳಲಿದ್ದಾರೆ. ಕೊರೊನಾ ಸಾಂಕ್ರಾಮಿಕದ ವಿರುದ್ಧ ಮುಂದಿನ ಹೋರಾಟಗಳ ಕುರಿತು ಜನರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿಧಿಸಲಾಗಿದ್ದ 7 ದಿನಗಳ ಲಾಕ್‌ಡೌನ್‌ ಮಂಗಳವಾರ ಅಂತ್ಯವಾಗಲಿದೆ. ಬೆಂಗಳೂರು ನಗರ ಕೋವಿಡ್‌ ಹೊಸ ಹಾಟ್‌ಸ್ಪಾಟ್‌ ಆಗಿ ಪರಿಣಮಿಸುತ್ತಿರುವುದರಿಂದ ಎದುರಾಗಿರುವ ಸವಾಲುಗಳು ಹಾಗೂ ಅದನ್ನು ಪರಿಹರಿಸಿಕೊಂಡು ಮುನ್ನಡೆಯುವ ಕುರಿತು ಜನರಿಗೆ ತಿಳಿಸುವ ಸಾಧ್ಯತೆ ಇದೆ. ಈವರೆಗೂ ಕೊರೊನಾ ಸೋಂಕು, ನಿಯಂತ್ರಣ ವಿಚಾರಗಳನ್ನು ಮಾಧ್ಯಮಗಳ ಮೂಲಕವೇ ಪ್ರಕಟಿಸುತ್ತಿದ್ದ ಯಡಿಯೂರಪ್ಪ ಅವರು ಇದೇ ಮೊದಲ ಬಾರಿಗೆ ನೇರವಾಗಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಾಮಾಜಿಕ ಜಾಲತಾಣದ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಲೈವ್‌ನಲ್ಲಿ ಮಾತನಾಡಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *