KARNATAKA
ಕಾರ್ಕಳ: ಮಾಳ ಘಾಟಿಯಲ್ಲಿ ಬಸ್ ಕಾರು ಡಿಕ್ಕಿ, ಐವರು ಪ್ರಯಾಣಿಕರು ಗಾಯ..!
ಕಾರ್ಕಳ : ಖಾಸಾಗಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್ಕೆ ಬಾರ್ಡರ್ನಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ.
ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸಂಗಮೇಶ್ (55), ಸುವರ್ಣ (45), ಸಾಕ್ಷಿ (20), ಸವನ್ (25) ಮತ್ತು ರಾಘವೇಂದ್ರ (32) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You must be logged in to post a comment Login