Connect with us

LATEST NEWS

ನಂತೂರು ಜಂಕ್ಷನ್ ಬಳಿ ಅಪಘಾತ :ಮಹಿಳೆ ಸಾವು

ನಂತೂರು ಜಂಕ್ಷನ್ ಬಳಿ ಅಪಘಾತ : ಮಹಿಳೆ ಸಾವು

ಮಂಗಳೂರು ಡಿಸೆಂಬರ್ 7: ಖಾಸಗಿ ಬಸ್ ಹಾಗೂ ಕಂಟೈನರ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಮಂಗಳೂರಿನ ನಂತೂರು ಜಂಕ್ಷನ್ ನಲ್ಲಿ ನಡೆದಿದೆ.

ಇಂದು ಬೆಳಿಗ್ಗೆ 7.15ರ ಸಮಯದಲ್ಲಿ ಈ ಘಟನೆ ನಡೆದಿದೆ.

ಖಾಸಗಿ ಬಸ್ ಬಿಕರ್ನಕಟ್ಟೆಯಿಂದ ಸ್ಟೇಟ್ ಬ್ಯಾಂಕ್ ನತ್ತ ತೆರಳುತ್ತಿದ್ದು, ಗುಜರಾತ್ ನ ಕಂಟೈನರ್ ಟ್ರಕ್ ಪಣಂಬೂರಿನಿಂದ‌ ಪಂಪ್ ವೆಲ್ ನತ್ತ ತೆರಳುತ್ತಿತ್ತು.

ನಂತೂರು ಜಂಕ್ಷನ್ ನಲ್ಲಿ ಕಂಟೈನರ್ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ನಂತರ ಒಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಒರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು 17 ಮಂದಿಗೆ ಗಾಯಗಳಾಗಿವೆ.

ಮೃತಪಟ್ಟವರನ್ನು ಗುರುಪುರ ಕೈಕಂಬದ ನಿವಾಸಿ ಕವಿತಾ ಎಂದು ಗುರುತಿಸಲಾಗಿದೆ.

ವೆನ್ಲಾಕ್ ಆಸ್ಪತೆಯಲ್ಲಿ ಕೆಲಸ ಮಾಡುತ್ತಿದ್ದ ಕವಿತಾ ಅವರು ಬಸ್ ನ ಮುಂಭಾಗದಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಕಂಟೈನರ್ ಬಸ್ ನ ಮುಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕವಿತಾ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಬಸ್ ಚಾಲಕ , ಕಂಟೈನರ್ ಚಾಲಕ ಹಾಗೂ ಕಾರಿನಲ್ಲಿದ್ದ ಧರ್ಮಗುರು ಗಳು ಸೇರಿದಂತೆ ಸುಮಾರು 17 ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟಿಯೋಗಾಗಿ…

Share Information
Continue Reading
Advertisement
Click to comment

Leave a Reply

Your email address will not be published. Required fields are marked *