Connect with us

LATEST NEWS

ತೀರ್ಥಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೊಂಡಾಡಿ ಮೂಲದ ಉದ್ಯಮಿ ಪ್ರಸನ್ನ ಶೆಟ್ಟಿ

ಹಿರಿಯಡ್ಕ ಅಕ್ಟೋಬರ್ 13: ಶಿವಮೊಗ್ಗ ತೀರ್ಥಹಳ್ಳಿಯ ಲಾಡ್ಜ್ ಒಂದರಲ್ಲಿ ಕೊಂಡಾಡಿ ಮೂಲದ ಉದ್ಯಮಿ ಪ್ರಸನ್ನ ಶೆಟ್ಟಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವಾವಿದ್ದರು ಎಂದು ಹೇಳಲಾಗಿದ್ದು ನಿನ್ನೆ ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದ ಕಾರಣ ಅನುಮಾನ ಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ರೆಸ್ಟೊರೆಂಟ್ ಬೇಕರಿ ಉದ್ಯಮವನ್ನು ನಡೆಸುತ್ತಿದ್ದಾರೆ. ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್ ಮೂಲದಿಂದ ಮಾಹಿತಿ ಲಭ್ಯವಾಗಿದೆ.

ಅಂತ್ಯಕ್ರಿಯೆಯನ್ನುಅವರ ಹಿರಿಯರ ಮನೆಯಾದ ಕೊಂಡಾಡಿಯಲ್ಲಿ ನೆರವೇರಿಸಲಾಗಿದೆ. ಮೃತರು ಪತ್ನಿ, ಎರಡು ವರ್ಷದ ಪುತ್ರಿ, ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *