LATEST NEWS
ಬೈಂದೂರು – ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ಧಾರುಣ ಅಂತ್ಯ
ಬೈಂದೂರು ಸೆಪ್ಟೆಂಬರ್ 25: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಬೈಂದೂರು ಯೋಜನಾ ನಗರದ ನಿವಾಸಿ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ನಿವಾಸಿ ಶಾನು ಶಾಲಿಯಾನ್ ಅವರ ಪುತ್ರ ಮೊಹಮದ್ ಶಫಾನ್ (13) ಮೃತಪಟ್ಟ ವಿದ್ಯಾರ್ಥಿಗಳು.
ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು ಬಾರದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ಕೆರೆಯಲ್ಲಿ ಸಾರ್ವಜನಿಕರು ಪ್ರತಿನಿತ್ಯವೂ ಈಜಲು ಬರುತ್ತಿದ್ದು, ಮಂಗಳವಾರ ತಾಲೂಕಿನಾದ್ಯಂತ ವಿಪರೀತ ಮಳೆ ಇರುವ ಹಿನ್ನೆಲೆ ಕರೆಯ ಸಮೀಪ ಯಾರೂ ಬಾರದ ಕಾರಣ ಸಂಜೆಯವರೆಗೂ ಘಟನೆ ಬೆಳಕಿಗೆ ಬಂದಿಲ. ಮಕ್ಕಳಿಗಾಗಿ ತೀವ್ರ ಹುಡುಕಾಟ ನಡೆಸಿದ ಬಳಿಕ ಕೆರೆ ಸಮೀಪ ಸೈಕಲ್ ಹಾಗೂ ಚಪ್ಪಲಿ ಇದ್ದುದರಿಂದ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login