KARNATAKA
ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಳ್ಳಿ: ಸಾರ್ವಜನಿಕರಿಂದ ಬಿತ್ತು ಗೂಸಾ
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 16: ಮಹಿಳೆಯೊಬ್ಬಳು ಸರ ಕದಿಯಲು ಯತ್ನಿಸಿ, ಗ್ರಾಮಸ್ಥರಿಂದಲೇ ಗೂಸಾ ತಿಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಬಳಿ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದ ಕಳ್ಳಿಗೆ ಗ್ರಾಮಸ್ಥರೇ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸರಗಳ್ಳಿಯನ್ನು ನಂದಿನಿ ಎಂದು ಗುರುತಿಸಲಾಗಿದೆ.
ಮಧುರೈ-ಹೆಸರುಘಟ್ಟ ರಸ್ತೆಯಲ್ಲಿ ಬೆಳಿಗ್ಗೆಯಿಂದಲೂ ಬೈಕ್ ಸವಾರನೊಂದಿಗೆ ಮಹಿಳೆ ಸುತ್ತಾಡುತ್ತಿದ್ದಳು. ನಂತರ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತುಕೊಳ್ಳಲು ಯತ್ನಿಸಿ, ಬೈಕ್ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಈ ವೇಳೆ ಬೈಕ್ ಸವಾರ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಸಿಕ್ಕಿಬಿದ್ದ ಸರಗಳ್ಳಿಗೆ ಗ್ರಾಮಸ್ಥರು ಥಳಿಸಿ, ದೊಡ್ಡಬೆಳವಂಗಲ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
You must be logged in to post a comment Login