DAKSHINA KANNADA
ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ಕಾರ್ಯಕ್ರಮ ರದ್ದು
ಮಂಗಳೂರು, ಜೂನ್ 25: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ, ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಸೇವಾಂಜಲಿ ಟ್ರಸ್ಟ್ನ ಸಹಕಾರದಲ್ಲಿ ‘ಚಿಂತನ ಗಂಗಾ’ ಹೆಸರಿನಲ್ಲಿ ಇಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಇಂದಿನ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮಕ್ಕೆ ಬಿಲ್ಲವ ಸಂಘಟನೆ, ಎಡಪಕ್ಷ ಹಾಗೂ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಜೊತೆಗೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು, ಈ ಹಿನ್ನೆಲೆಯಲ್ಲಿ ನಗರದ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
You must be logged in to post a comment Login