Connect with us

KARNATAKA

ಪತಿ ಕ್ಯಾನ್ಸರ್ ಗೆ ಬಲಿ – ಮಗನಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆಗೆ ಶರಣಾದ ತಾಯಿ!

ಬೆಂಗಳೂರು ಜುಲೈ 14 : ಬೆಂಗಳೂರಿನಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಕುಟುಂಬದಲ್ಲಿ ಗಂಡ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ. ನಂತರ ಕುಟುಂಬ ನಿರ್ವಹಣೆ ಮಾಡಲಾಗದೇ ಪತ್ನಿ ಹಾಗೂ ಮಕ್ಕಳು ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಯಲಹಂಕದ ಆರ್’ಎನ್’ಝೆಡ್ ಅಪಾರ್ಟ್ ಮೆಂಟ್ ನಿವಾಸಿ ರಮ್ಯಾ (43) ಮತ್ತು ಆಕೆಯ ಪುತ್ರ ಭಾರ್ಗವ್ (13) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಜು.9ರ ರಾತ್ರಿ ಈ ಘಟನೆ ನಡೆದಿದ್ದು, ಜು.12ರ ಸಂಜೆ ಪುತ್ರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಶ್ರೀಧರ್ ಪುಲಿವರ್ತ ಹಾಗೂ ರಮ್ಯಾ ಪರಸ್ಪರ ಪ್ರೀತಿಸಿ 20 ವರ್ಷಗಳ ಹಿಂದೆ ಮನೆಯವರ ವಿರೋಧದ ನಡುವೆಯೂ ಅಂತರ್ಜಾತಿ ಮದುವೆ ಮಾಡಿಕೊಂಡಿದ್ದಾರೆ. ಶ್ರೀಮಂತಿಕೆಯ ಜೀವನ ನಡೆಸುತ್ತಿದ್ದ ಈ ಕುಟುಂಬಕ್ಕೆ ಕ್ಯಾನ್ಸರ್ ಎಂಬ ಮಹಾಮಾರಿ ವಕ್ಕರಿಸಿದೆ. ಸುಂದರ ಕುಟುಂಬದ ದುಡಿಯುವ ವ್ಯಕ್ತಿ ಶ್ರೀಧರ್ ಪುಲಿವರ್ತಿಗೆ ಕ್ಯಾನ್ಸರ್ ರೋಗ ಕಾಣಿಸಿಕೊಂಡಿದೆ. ತಮ್ಮ ಜೀವನದಲ್ಲಿ ದುಡಿದು ಉಳಿತಾಯ ಮಾಡಿದ ಹಣವನ್ನೆಲ್ಲಾ ಚಿಕಿತ್ಸೆಗೆ ವೆಚ್ಚ ಮಾಡಿದ್ದಾರೆ. ಆದರೂ, ಗಂಡ ಶ್ರೀಧರ್ ಬದುಕಲೇ ಇಲ್ಲ.

ಈ ಸಾವು ಇಡೀ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿ, ಕೊನೆಗೆ ಸಂಕಷ್ಟಕ್ಕೆ ಸಿಲುಕಿದ್ದ ರಮ್ಯಾ ನಾವು ಕುಟುಂಬ ಸಮೇತವಾಗಿ ಸತ್ತು ಹೋಗುವುದೊಂದೇ ದಾರಿ ಎಂದು ಅಳಲು ತೋಡಿಕೊಂಡಿದ್ದರಂತೆ. ಈಗ ಅದೇ ರೀತಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *