LATEST NEWS
ಮಾತೆರೆಗ್ಲ ಸೊಲ್ಮೆಲು ಸಂಸತ್ ನಲ್ಲೂ ತುಳು……. ತುಳುನಾಡಿನ ದೈವ ದೈವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
ನವದೆಹಲಿ ಜೂನ್ 24: ದಕ್ಷಿಣಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಸಂಸತ್ ನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ಸಂಸತ್ ಅಧಿವೇಶನದ ಮೊದಲ ದಿನ ನೂತನ ಸಂಸದರಿಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರು ಸೋಮವಾರ ಸಂಸತ್ತಿನ ಅಧಿವೇಶನ ಆರಂಭವಾಗುತ್ತಲೇ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದ ಸರದಿ ಬಂದಾಗ, ಬ್ರಿಜೇಶ್ ಚೌಟ ತುಳುನಾಡಿನ ಶೈಲಿಯ ವೇಷ ಭೂಷಣದಲ್ಲಿ ಗಮನ ಸೆಳೆದರು. ಬಿಳಿ ಅಂಗಿ ಮತ್ತು ಬಿಳಿ ಲುಂಗಿಯನ್ನು ಧರಿಸಿದ್ದ ಬ್ರಿಜೇಶ್ ಚೌಟ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೊನೆಯಲ್ಲಿ ‘’ಮಾತೆರೆಗ್ಲ ಸೊಲ್ಮೆಲು’’ (ಎಲ್ಲರಿಗೂ ಧನ್ಯವಾದಗಳು) ಎನ್ನುವ ಮೂಲಕ ತನ್ನ ತುಳು ಭಾಷಾ ಪ್ರೇಮವನ್ನೂ ತೋರಿದ್ದಾರೆ. ಅಲ್ಲದೆ, ಪ್ರಮುಖವಾಗಿ ತುಳುನಾಡಿನ ದೈವ – ದೈವರ ಹೆಸರು ಉಲ್ಲೇಖಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
You must be logged in to post a comment Login