Connect with us

    KARNATAKA

    ಅಪಘಾತದಲ್ಲಿ ಕಾರಿಗೆ ಬೆಂಕಿ – ಹೊರಬರಲಾಗದೆ ಸಜೀವ ದಹನಗೊಂಡ ಚಾಲಕ

    ಚಾಮರಾಜನಗರ, ಜು2: ಗೂಡ್ಸ್ ಲಾರಿ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಸಜೀವ ವಾಗಿ ದಹನಗೊಂಡು ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಗುಂಡ್ಲುಪೇಟೆ ತಾಲೂಕು ಬೇಗೂರು ಬಳಿ ಹಿರೀಕಾಟ ಗೇಟ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.


    ಮೃತರನ್ನು ಮೈಸೂರಿನ ಮುಝಮ್ಮಿಲ್ ಅಹ್ಮದ್(35) ಎಂದು ಗುರುತಿಸಲಾಗಿದೆ. ಲಾರಿ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶನಿವಾರ ರಾತ್ರಿ 10:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ಹಾಗೂ ಗೂಡ್ಸ್ ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು. ಎರಡು ವಾಹನಗಳು ಮುಖಾಮುಖಿ ಢಿಕ್ಕಿಯಾಗಿದ್ದು, ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಳ್ಳು ತ್ತಿದ್ದಂತೆ ಗೂಡ್ಸ್ ವಾಹನದಲ್ಲಿದ್ದವರು ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಚಾಲಕ ಹೊರಬರಲಾಗದೆ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply