Connect with us

    KARNATAKA

    ಮಧುಗಿರಿ – ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ – ಐವರ ಧಾರುಣ ಸಾವು

    ಮಧುಗಿರಿ ಸೆಪ್ಟೆಂಬರ್ 08: ಗೌರಿ ಗಣೇಶ ಹಬ್ಬ ಮುಗಿಸಿ ಬರುತ್ತಿದ್ದ ವೇಳೆ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಸಾವನಪ್ಪಿದ ಘಟನೆ ಮದುಗಿರಿ ತಾಲ್ಲೂಕಿನ ಕಾಟಗೊಂಡನಹಳ್ಳಿ ಬಳಿ ನಡೆದಿದೆ.


    ಮೃತರನ್ನು ಪಾವಗಡ ತಾಲ್ಲೂಕಿನ ಎತ್ತಿನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ (62), ಅವರ ಮಗಳು ಸಿಂಧುಜಾ (34), ಮೊಮ್ಮಗ ವೇದಾಸ್ ರೆಡ್ಡಿ (8), ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿಯ ಕಾರೇನಹಳ್ಳಿ ಗ್ರಾಮದ ನಾಗರಾಜು (34), ಸಿದ್ಧಗಂಗಪ್ಪ (35) ಎಂದು ಗುರುತಿಸಲಾಗಿದೆ.


    ಎತ್ತಿನಹಳ್ಳಿ ಗ್ರಾಮದ ಗೀತಾ (29), ಪುತ್ರ ಯೋದಾಕಿರಣ್ (14), ಚಾಲಕ ಆನಂದ್ (30), ಮೃತ ಸಿಂಧೂಜಾ ಪುತ್ರ ಟ್ರಯಾಗಸ್ ದೇವ್ ರೆಡ್ಡಿ (14 ತಿಂಗಳು) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
    ತುಮಕೂರು ಕಡೆಯಿಂದ ಬರುತ್ತಿದ್ದ ಸಿಯಾಜ್ ಮಾರುತಿ ಕಾರು ಹಾಗೂ ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಹೊರಟಿದ್ದ ಟಾಟಾ ಟಿಯಾಗೋ ಕಾರಿನ ನಡುವೆ ಅಫಘಾತ ಸಂಭವಿಸಿದೆ. ಸ್ಥಳಕ್ಕೆ ತುಮಕೂರು ಎಸ್ಪಿ ಕೆ.ವಿ ಅಶೋಕ್ ಹಾಗೂ ಮಧುಗಿರಿ ಠಾಣೆ ಪಿಎಸ್‌ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಅಪಘಾತಕ್ಕೀಡಾದ ಕಾರುಗಳನ್ನ ಸ್ಥಳದಿಂದ ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply