Connect with us

    BANTWAL

    ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಅಪಘಾತ- ಮೂವರಿಗೆ ಗಾಯ

    ವಿಟ್ಲ ಜನವರಿ 06: ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಎರಡು ವಾಹನಗಳ ಜಖಂಗೊಂಡು,ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


    ಇಲ್ಲಿನ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ಅಪಘಾತ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಿಂದಾಗಿ ಆಟೋದಲ್ಲಿದ್ದವರಿಗೆ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಅಪಘಾತದ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply