DAKSHINA KANNADA
ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ತುಂಡಾಗಿ ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಕಾಲು
ಪುತ್ತೂರು ಮಾರ್ಚ್ 20: ಕಾರು ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರ ಕಾಲು ತುಂಡಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಬಳಿಯ ಸಣ್ಣಂಪ್ಪಾಡಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ, ಬೈಕ್ ನಲ್ಲಿ ಮೂವರು ಸಂಚರಿಸುತ್ತಿದ್ದರು ಎಂದು ಹೇಳಲಾಗಿದ್ದು, ಅಫಘಾತದಿಂದ ಮೂವರಿಗೆ ಗಂಭೀರ ಗಾಯಗಳಾಗಿದೆ.
ಡಿಕ್ಕಿ ರಭಸಕ್ಕೆ ಬೈಕ್ ಸವಾರನ ಕಾಲು ತುಂಡಾಗಿ ರಸ್ತೆ ಮೇಲೆ ಬಿದ್ದಿದ್ದು, ಅಪಘಾತದ ತೀವೃತೆಯನ್ನು ತಿಳಿಸುವಂತಿದೆ. ಸುಧಾಕರ, ಲೋಕಯ್ಯ ಮತ್ತು ರವಿ ಎಂದು ಗುರುತಿಸಲಾಗಿದ್ದು, ಮೂವರನ್ನೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login