Connect with us

BANTWAL

ಎರಡು ಕಾರು ಬಸ್ ಗಳ ನಡುವೆ ಸರಣಿ ಅಪಘಾತ – ಓರ್ವ ಗಂಭೀರ

ಬಂಟ್ವಾಳ ಅಕ್ಟೋಬರ್ 21: ಎರಡು ಕಾರು ಹಾಗೂ ಬಸ್‌ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ನಡೆದಿದೆ.


ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿಯವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇಲ್ಲಿನ ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ನ ಎ.ಇ.ಪ್ರವೀಣ್ ಜೋಶಿ ಅವರ ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಬಳಿಕ ಹಿಂಬದಿಯಿಂದ ಬಂದ್ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ಜೋಶಿ ಅವರನ್ನು ತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳು ಜೋಶಿ ಅವರನ್ನು ವಾಹನದಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *