LATEST NEWS
ಮಣಿಪಾಲ- ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು…!!
ಮಣಿಪಾಲ- ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು…!!
ಉಡುಪಿ ಎಪ್ರಿಲ್ 17 : ಲಾಕ್ ಡೌನ್ ನಡುವೆ ಹಲವು ದಿನಗಳ ನಂತರ ತೆಗೆದು ಕಾರು ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
ಉಡುಪಿಯ ಬನ್ನಂಜೆ ನಿವಾಸಿ ಭಾಗೀರಥಿ ಎಂಬವರಿಗೆ ಸೇರಿದ ಮಾರುತಿ ಸ್ವಿಪ್ಟ್ ಡಿಸೈರ್ ಕಾರು ಇದಾಗಿದ್ದು, ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸಂಬಂಧಿಕರ ಆರೋಗ್ಯ ವಿಚಾರಣೆಗೆ ಹೋಗುತ್ತಿದ್ದರು, ಆಸ್ಪತ್ರೆಗೆ ನೂರಿನ್ನೂರು ಮೀಟರ್ ಇರುವಾಗ ಈ ದುರ್ಘಟನೆ ಆಗಿದೆ.
ಕೆಎಂಸಿ ಮಣಿಪಾಲ ಆಸ್ಪತ್ರೆಯ ಫೈರ್ ಇಂಜಿನ್ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. ಕೆಎಂಸಿ ಅಗ್ನಿಶಾಮಕ ಸಿಬ್ಬಂದಿ, ಮಣಿಪಾಲ ಪೊಲೀಸರು ಮತ್ತು ಸಾರ್ವಜನಿಕರು ಜನ ಹತ್ತಿರ ಬಾರದಂತೆ ನೋಡಿಕೊಂಡರು. ಮಣಿಪಾಲಾ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾರನ್ನು ಮನೆಲ್ಲೇ ನಿಲ್ಲಿಸಿದ್ದ ಸಂದರ್ಭ ಇಲಿಗಳು ವಯರ್ ಕಟ್ ಮಾಡಿರಬಹುದು. ಹಾಗಾಗಿ ಶಾರ್ಟ್ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗಿದೆ.
You must be logged in to post a comment Login