LATEST NEWS
ಪಿವಿಎಸ್ ಸರ್ಕಲ್ ಬಳಿ ಬೆಂಕಿಗೆ ಆಹುತಿಯಾದ ಕಾರು
ಮಂಗಳೂರು ಡಿಸೆಂಬರ್ 12: ನಗರದ ಪಿವಿಎಸ್ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಕೊಡಿಯಾಲ್ ಬೈಲ್ ನಿಂದ ಪಿವಿಎಸ್ ಕಡೆ ತೆರಳುತ್ತಿದ್ದ ಕಾರು ಪಿವಿಎಸ್ ಸರ್ಕಲ್ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಚಾಲಕ ಸೇರಿ ಮೂವರು ಮಹಿಳೆಯರಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೂ ಕಾರು ಭಾಗಶಃ ಬೆಂಕಿಗೆ ಆಹುತಿಯಾಗಿದೆ.
Facebook Comments
You may like
-
ಮಂಗಳೂರು – ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ
-
ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ..ಆರೋಪಿ ಪತ್ತೆಗೆ ವಿಶೇಷ ತಂಡ
-
ಮಂಗಳೂರು ಬಸ್ ನಲ್ಲಿ ಲೈಂಗಿಕ ಕಿರುಕುಳ: ಯುವತಿ ಮಾಡಿದ ಪೋಸ್ಟ್ ವೈರಲ್
-
ವಿದ್ಯಾರ್ಥಿನಿಯರ ಮೈಮುಟ್ಟಿ ಚುಡಾಯಿಸುತ್ತಿದ್ದ ಅಪ್ರಾಪ್ತನಿಗೆ ಬಿತ್ತು ಧರ್ಮದೇಟು..!!
-
ಅಂಡರ್ ವೇರ್ ನಲ್ಲಿ 2.15 ಕೆಜಿ ಚಿನ್ನ ಸಾಗಾಟಕ್ಕೆ ಯತ್ನ ಇಬ್ಬರು ಆರೆಸ್ಟ್
-
ಮನೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ರಬ್ಬರ್, ಮೆಣಸು ಬೆಂಕಿಗಾಹುತಿ..!
You must be logged in to post a comment Login