Connect with us

    BANTWAL

    ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಕಾರು ಡಿಕ್ಕಿ: ಸವಾರನಿಗೆ ಗಂಭೀರ ಗಾಯ

    ಬಂಟ್ವಾಳ, ಸೆಪ್ಟೆಂಬರ್ 13: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ಸೆ.12 ರಂದು ಮಧ್ಯಾಹ್ನ ವೇಳೆ ನಡೆದಿದೆ.

    ತಮಿಳುನಾಡು ಮೂಲದ ವೈವೇಶಪುರಂ ನಿವಾಸಿ ಗೋಪಿನಾಥ್ ಬಿ.(22) ಗಾಯಗೊಂಡ ವ್ಯಕ್ತಿ. ಗೋಪಿನಾಥ್ ಅವರ ಚಿಕ್ಕಪ್ಪ ನ‌ ಜೊತೆ ಬೈಕ್ ನಲ್ಲಿ ಬಂಟ್ವಾಳ ದಿಂದ ಮಣಿಹಳ್ಳ ಕಡೆಗೆ ಹೋಗುತ್ತಿದ್ದ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

    ಜಕ್ರಿಬೆಟ್ಟು ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿಯಾಗಿದೆ.
    ಡಿಕ್ಕಿಯ ರಭಸಕ್ಕೆ ಬೈಕ್ ಹೆದ್ದಾರಿಗೆ ಮಗುಚಿ ಬಿದ್ದಿದೆ ಅಲ್ಲದೆ ಬೈಕ್ ಸವಾರ ಗೋಪಿನಾಥ್ ಅವರಿಗೂ ಗಾಯವಾಗಿದೆ.

    ಕಾರು ಚಾಲಕ ಮ್ಯಾಥ್ಯೂ ಅವರ ಅಜಾಗರೂಕತೆಯ ಚಾಲನೆಯೇ ಈ ಘಟನೆ ಗೆ ಕಾರಣವೆನ್ನಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ವಿರುದ್ದ ಪ್ರಕರಣ ದಾಖಲಾಗಿದ್ದು, ಸೂಕ್ತ ಕಾನೂನು ಕ್ರಮಕ್ಕೆ ದೂರಿನಲ್ಲಿ ತಿಳಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply