Connect with us

DAKSHINA KANNADA

ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹೊಳೆಗೆ ಬಿದ್ದ ಕಾರು ಓರ್ವ ಸಾವು…!!

ಪುತ್ತೂರು ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.


ಮೃತರನ್ನು ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್(44) ಎಂದು ಗುರುತಿಸಲಾಗಿದ್ದು, ಕಾರಿನ ಚಾಲಕ ಗೋಪಿ (45)ಎಂಬುವರಿಗೆ ಕಾಲು ಮುರಿದಿದ್ದು ಇವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಇನ್ನು ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *