Connect with us

    LATEST NEWS

    ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಕಾರು ಪ್ರಾಣಾಪಾಯದಿಂದ ಪಾರಾದ ಚಾಲಕ

    ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಕಾರು ಪ್ರಾಣಾಪಾಯದಿಂದ ಪಾರಾದ ಚಾಲಕ

    ಮಂಗಳೂರು ಜನವರಿ 4: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಹೊತ್ತಿ ಉರಿದು, ಚಾಲಕ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಡ್ಡೇಲು ಎಂಬಲ್ಲಿ ನಡೆದಿದೆ.

    ಇಲ್ಲಿನ ರಾಮಕುಂಜ ನಿವಾಸಿ ಪ್ರವೀಣ್ ಡಿ’ಸೋಜಾ ಬೆಂಗಳೂರಿನಿಂದ ರಾಮಕುಂಜದ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ವಾಹನದಲ್ಲಿ ಹೊಗೆ ಆವರಿಸಿರುವುದನ್ನು ಗಮನಿಸಿದ ಪ್ರವೀಣ್ ಕಾರಿನಿಂದ ಹೊರಗಡೆ ಇಳಿದಿದ್ದಾರೆ. ನಂತರ ನೋಡ ನೋಡುತ್ತಿದಂತೆ ಕಾರು ಸಂಪೂರ್ಣ ಹೊತ್ತಿ ಉರಿದಿದ್ದು, ನೆಲ್ಯಾಡಿ ಹೊರಠಾಣಾ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply