Connect with us

    KARNATAKA

    ದರ್ಗಾಗೆ ಗುದ್ದಿದ ಕಾರ್ – ಒಂದೇ ಕುಟುಂಬದ ಮೂವರ ಸಾವು

    ಹುಬ್ಬಳ್ಳಿ, ಆಗಸ್ಟ್ 07: ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ – ಪುಣೆ, ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

    ಹುಬ್ಬಳ್ಳಿ ಸಮೀಪ ಜಿಗಳೂರ ಗ್ರಾಮದ ಬಳಿ ಈ ಭೀಕರ ಕಾರ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹನಮಂತಪ್ಪ ಬೇವಿನಕಟ್ಟಿ, ಪತ್ನಿ ರೇಣುಕಾ, ಅಳಿಯ ರವೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮೃತರು ಬೆಂಗಳೂರಿನಲ್ಲಿ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ಕಾರ್‌ನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ಚಾಲಕನ ನಿರ್ಲಕ್ಷ್ಯದಿಂದ ರಸ್ತೆಯ ಪಕ್ಕದಲ್ಲಿದ್ದ ದರ್ಗಾಗೆ ಕಾರ್‌ ಗುದ್ದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply