Connect with us

KARNATAKA

ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಹರಿದ ಕಾರು….ಸ್ಥಳದಲ್ಲೇ ಸಾವನಪ್ಪಿದ ಯುವತಿ

ಬೆಳಗಾವಿ ಮಾರ್ಚ್ 24: ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.

ಮೃತ ಐಶ್ವರ್ಯಾ ಎಂಬ ಯುವತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ ಮೇಲೆ ಹರಿದು ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಯುವತಿಯ ತಲೆಗೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Advertisement
Click to comment

You must be logged in to post a comment Login

Leave a Reply