DAKSHINA KANNADA
ಬಿಜೆಪಿ ಅಲ್ಪಸಂಖ್ಯಾತ ಮುಖಂಡ ರಹೀಂ ಉಚ್ಚಿಲ್ ಮೇಲೆ ಕೇಸ್
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಿಜೆಪಿ ಅಲ್ಪಸಂಖ್ಯಾತ ಮುಖಂಡ ರಹೀಂ ಉಚ್ಚಿಲ್ ಮೇಲೆ ಕೇಸ್
ಮಂಗಳೂರು ಅಕ್ಟೋಬರ್ 5: ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಕಾಂಗ್ರೇಸ್ ಕೈವಾಡವಿದೆ ಎಂದು ಆರೋಪಿಸಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್ ಮೇಲೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಮುಕ್ಕಚ್ಚೇರಿ ಜುಬೈರ್ ಕೊಲೆಯಾಗಿದ್ದು ಈ ಕೊಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೈವಾಡ ಇದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್ ದೃಶ್ಯ ಮಾಧ್ಯಮಗಳಲ್ಲಿ ಆರೋಪ ಮಾಡಿದ್ದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಈ ಬಗ್ಗೆ ತೊಕ್ಕೊಟ್ಟು ನಡೆದ ಸುದ್ದಿಗೋಷ್ಟಿಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ರಹೀಂ ಉಚ್ಚಿಲ್ ಆರೋಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ದೃಶ್ಯ ಮಾಧ್ಯಮಗಳಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮುಖಂಡ ರಹೀಂ ಉಚ್ಚಿಲ್ ಆರೋಪ ಮಾಡಿ ತನಿಖೆ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿನ್ನಲೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ವಿರುದ್ದ ಸುಳ್ಳು ಆರೋಪ ಹೊರಿಸಿದ ರಹೀಮ ಉಚ್ಚಿಲ್ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ ಈ ಕೂಡಲೇ ಪೊಲೀಸರು ರಹೀಂ ಉಚ್ಚಿಲ್ ರನ್ನು ಬಂಧನ ಮಾಡಬೇಕೆಂದು ಒತ್ತಾಯಿಸಿದ ಅವರು, ಬಂಧಿಸದೇ ಇದ್ದರೆ ಠಾಣೆಯೆದುರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
You must be logged in to post a comment Login