Connect with us

    BANTWAL

    ವಿಟ್ಲದಲ್ಲಿ ಗೋಸಾಗಾಟ: ತಡೆದು ನಿಲ್ಲಿಸಿದ ಹಿಂದೂ ಸಂಘಟನೆ-ಆರೋಪಿಗಳು ಪರಾರಿ

    ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದೆ.

    ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರೆತ ಹಿಂದೂ ಸಂಘಟನೆಯ ಕಾರ್ಯಕರ್ತರು ಕೋಡಂದೂರು ಬಳಿ ಕಾರು ತಡೆಯುತ್ತಿದ್ದಂತೆ ಆರೋಪಿಗಳು ಕಾರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

    ಬಳಿಕ ಕಾರಿನ ಗಾಜನ್ನು ಒಡೆದು ಪರಿಶೀಲಿಸಿದಾಗ ಹಿಂಸಾತ್ಮಕ ರೀತಿಯಲ್ಲಿ ಎರಡು ಗೋವುಗಳನ್ನು ಕಟ್ಟಿ ಹಾಕಿದ್ದರು. ಸ್ಥಳಕ್ಕೆ ವಿಟ್ಲ ಠಾಣೆಯ ಪೊಲೀಸರು ಭೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply