Connect with us

    LATEST NEWS

    ದನದ ವ್ಯಾಪಾರಿ ಸಾವಿನ ಪ್ರಕರಣ ಹಿರಿಯಡ್ಕ ಪೊಲೀಸ್ ಠಾಣೆ ಎಸ್ ಐ ಬಂಧನ

    ದನದ ವ್ಯಾಪಾರಿ ಸಾವಿನ ಪ್ರಕರಣ ಹಿರಿಯಡ್ಕ ಪೊಲೀಸ್ ಠಾಣೆ ಎಸ್ ಐ ಬಂಧನ

    ಉಡುಪಿ ಜೂನ್ 3: ದಕ್ಷಿಣಕನ್ನಡ ಜಿಲ್ಲೆಯ ಜೊಕಟ್ಟೆ ನಿವಾಸಿ ದನದ ವ್ಯಾಪಾರಿ ಹುಸೇನಬ್ಬ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಎಸ್ಐಯನ್ನು ಬಂಧಿಸಲಾಗಿದೆ.

    ದನದ ವ್ಯಾಪಾರಿಯಾಗಿರುವ ಹುಸೇನಬ್ಬ ಅವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಉಡುಪಿ ಪೊಲೀಸರು ಹಿರಿಯಡ್ಕ್ ಪೊಲೀಸ್ ಎಸ್ ಐ ಡಿ.ಎನ್ ಕುಮಾರ್ ಸೇರಿದಂತೆ ಪೊಲೀಸ್ ಜೀಪು ಚಾಲಕ ಗೋಪಾಲ್ ಹಾಗೂ ಹೆಡ್ ಕಾನ್ ಸ್ಟೇಬಲ್ ಮೋಹನ ಕೋತ್ವಾಲ್ ಎಂಬವರನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆ ಮೂಲದ ಜೋಕಟ್ಟೆ ನಿವಾಸಿಯಾಗಿರುವ ಹುಸೇನಬ್ಬ ಕಳೆದ 35 ವರ್ಷಗಳಿಂದ ಹಸುವಿನ ವ್ಯಾಪಾರ ಮಾಡುತ್ತಿದ್ದರು. ಮೇ 30 ರಂದು ಬೆಳಿಗ್ಗೆ ಹುಸೇನಬ್ಬ ಅವರ​​ ಮೃತದೇಹ ಬೆಳಗ್ಗೆ ಕಾಫಿ ತೋಟದಲ್ಲಿ ಪತ್ತೆಯಾಗಿತ್ತು. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದರು.

    ಆದರೆ ದನ ಸಾಗಾಟದ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರ ಜೊತೆಗೂಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬ ಕೊಲೆ ಪ್ರಕರಣ ದಾಖಲಿಸಿದ್ದರು.

    ಪ್ರಕರಣದ ಬೆಳಕಿಗೆ ಬಂದಂತೆ ಕರ್ತವ್ಯ ಲೋಪ ವೇಸಗಿದ್ದ ಆರೋಪದಲ್ಲಿ ಹಿರಿಯಡ್ಕ್ ಠಾಣೆಯ ಎಸ್ ಐ ಡಿ.ಎನ್ ಕಮಾರ್ ಅವರನ್ನು ಅಮಾನತುಗೊಳಿಸಿ ಉಡುಪಿ ಎಸ್ಪಿ ಆದೇಶಿಸಿದ್ದರು.

    ಪ್ರಕರಣ ತನಿಖೆ ನಡೆಸಿದ ಪೊಲೀಸರು ಈ ಮೊದಲು 4 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈಗ ಎಸ್ ಐ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಜರಂಗದಳದ ಕಾರ್ಯಕರ್ತರಾದ ಚೇತನ್ , ಶೈಲೇಶ್ ಶೆಟ್ಟಿ, ಗಣೇಶ್ ನಾಯ್ಕ ಎಂದು ಗುರುತಿಸಲಾಗಿದೆ.

    ಘಟನೆ ಹಿನ್ನಲೆ

    ಬಜರಂಗದಳದ ಕಾರ್ಯಕರ್ತರು ಹಾಗೂ ಹಿರಿಯಡ್ಕ ಪೊಲೀಸರು ಶನೇರುಬೆಟ್ಟು ಎಂಬಲ್ಲಿಗೆ ಮುಂಜಾನೆ ದನದ ಸಾಗಾಟದ ವಾಹನಕ್ಕಾಗಿ ಕಾದು ಕುಳಿತಿದ್ದರು. ಈ ವೇಳೆ ಶೇನರಬೆಟ್ಟು ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಪೊಲೀಸರು ಎದುರೇ ತಡೆದಿದ್ದರು ಎಂದು ಹೇಳಲಾಗಿದ್ದು. ಈ ಸಂದರ್ಭದಲ್ಲಿ ವಾಹನದಲ್ಲಿದ್ದ ಇಬ್ಬರು ಓಡಿ ಹೋಗಿದ್ದು ಹುಸೇನಬ್ಬ ಬಜರಂಗದಳದ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿದ್ದರು, ಈ ಸಂದರ್ಭದಲ್ಲಿ ಆರೋಪಿಗಳು ಹುಸೇನಬ್ಬ ಅವರ ಮೇಲೆ ಹಲ್ಲೆಮಾಡಿದ್ದರು. ನಂತರ ಅವರನ್ನು ಪೊಲೀಸರ ವಶಕ್ಕೆ ನೀಡಿದ್ದರು ಎಂದು ಹೇಳಲಾಗಿದೆ.

    ನಂತರ ಪೊಲೀಸರು ಹಲ್ಲೆಗೊಳಗಾಗಿದ್ದ ಹುಸೇನಬ್ಬ ಅವರನ್ನು ಇಲಾಖಾ ಜೀಪಿನಲ್ಲಿ ಪೊಲೀಸ್ ಠಾಣೆಗೆ ಕರೆತಂದಿದ್ದರು. ಆದರೆ ಹಲ್ಲೆಗೊಳಗಾಗಿದ್ದ ಹುಸೇನಬ್ಬ ದಾರಿ ಮಧ್ಯೆಯೇ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಬಜರಂಗದಳದ ಕಾರ್ಯಕರ್ತರ ಜೊತೆ ಸೇರಿ ಮೃತದೇಹವನ್ನು ಕೃತ್ಯ ನಡೆದ ಸ್ಥಳದಿಂದ ಸುಮಾರು 1 ಕಿಲೋ ಮೀಟರ್ ದೂರದಲ್ಲಿ ಇಟ್ಟು ಬಂದಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

    ನಂತರ ಬೆಳಿಗ್ಗೆ ಅಕ್ರಮ ದನದ ಸಾಗಾಟ ಸಂದರ್ಭದಲ್ಲಿ ಹೆದರಿ ತಪ್ಪಿಸಿಕೊಂಡು ಹೋಗುವಾಗ ಹೃದಯಾಘಾತದಿಂದ ಮೃತಪಟ್ಟಿದ್ದ ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

    ಹಿರಿಯಡ್ಕ ಠಾಣೆ ಎಸ್ ಐ ಹುಸೆನಬ್ಬ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸುವಲ್ಲಿ ಪ್ರಯತ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ ಮೂವರು ಪೊಲೀಸರ ದಸ್ತಗಿರಿ ಮಾಡಲಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಿ, ಪ್ರಸಾದ್, ಉಮೇಶ್, ರತನ್ ಈಗಾಗಲೇ ಬಂಧಿಸಲಾಗಿದೆ. ಬಂಧಿತರು ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply