Connect with us

DAKSHINA KANNADA

ಸ್ವಚ್ಛತಾ ಕಾರ್ಯಕ್ರಮದ ಮೂಲಕ ಪ್ರಧಾನಿ ಹುಟ್ಟುಹಬ್ಬ ಆಚರಣೆ

ಉಚ್ಚಿಲ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪ್ರಧಾನಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಕಡಲ ಕಿನಾರೆಯಲ್ಲಿ ಸೋಮೇಶ್ವರ ಪುರಸಭೆ , ಸ್ನೇಹ ಸಂಗಮ ಕ್ಲಬ್ ಉಚ್ಚಿಲ ಮತ್ತು ವಿವಿಧ ಸಂಘಟನೆಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯವನ್ನು ನಡೆಸಿದವು. ಕಡಲ ಕಿನಾರೆಯಲ್ಲಿ ಸಂಗ್ರಹವಾದ ಟನ್ ಗಟ್ಟಲೆ ಪ್ಲಾಸ್ಟಿಕ್ ಹಾಗು ಇನ್ನಿತರ ಸಾಮಾಗ್ರಿಗಳನ್ನು ಹೆಕ್ಕುವ ಮೂಲಕ ಈ ಭಾಗದ ಸುಮಾರು ಮೂರು ಕಿಲೋಮೀಟರ್ ಕಿನಾರೆಯನ್ನು ಸ್ವಚ್ಛ ಮಾಡಲಾಯಿತು.

ಸೋಮೇಶ್ವರ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ರಾಜೇಶ್ ಉಚ್ಚಿಲ್,ಬಿಜೆಪಿ ಮುಖಂಡ ಚಂದ್ರಶೇಖರ್ ಉಚ್ಚಿಲ್, ಕೋಟೆಕಾರು ಪಟ್ಟಣ ಒಂಚಾಯತ್ ಸದಸ್ಯ ಸುಜಿತ್ ಮಾಡೂರು ಮೊದಲಾದವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *