Connect with us

LATEST NEWS

ಶಿಕ್ಷಣ ಸಚಿನ ನಾಗೇಶ್ ಕಾರ್ಯಕ್ರಮಕ್ಕೆ ನುಗ್ಗಲು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಯತ್ನ..!!

ಮಂಗಳೂರು ಎಪ್ರಿಲ್ 27: ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಅಡ್ಡಿ ಪಡಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.


ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ್ದರು.ಈ ವೇಳೆ ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸಿ ಸಿಎಫ್‌ಐ ಪ್ರತಿಭಟನೆಗಿಳಿದಿತ್ತು.

ಅಲ್ಲದೆ ನಾಗೇಶ್ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್‌ಐ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದ್ದಾರೆ.ಬಿ.ಸಿ. ನಾಗೇಶ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ಧಿಕ್ಕಾರ ಘೋಷಿಸುತ್ತಾ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *