KARNATAKA
ವಿಚಾರಣೆ ವೇಳೆ ಅಸ್ವಸ್ಥಳಾಗಿ ಕುಸಿದು ಬಿದ್ದ ಚೈತ್ರಾ ಕುಂದಾಪುರ-ಆಸ್ಪತ್ರೆಗೆ ದಾಖಲು..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ ಉದ್ಯಮಿ ಗೋವಿಂದ ಪೂಜಾರಿಗೆ ಕೋಟ್ಯಾಂತರ ರೂಪಾಯಿಗನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರು ಪೊಲೀಸರಿಂದ ಬಂಧಿತಳಾಗಿದ್ದ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ಉಡುಪಿ ಉದ್ಯಮಿ ಗೋವಿಂದ ಪೊಊಜಾರಿಗೆ ಕೋಟ್ಯಾಂತರ ರೂಪಾಯಿಗನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರು ಪೊಲೀಸರಿಂದ ಬಂಧಿತಳಾಗಿದ್ದ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ MLA ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಬಂಧಿತಳಾಗಿದ್ದಾಳೆ.
ವಿಚಾರಣೆಗಾಗಿ ಚೈತ್ರಾರನ್ನು ನಗರದ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಪೊಲೀಸರು ಕರೆತಂದಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಚೈತ್ರಾ ಕುಸಿದುಬಿದ್ದರೆನ್ನಲಾಗಿದೆ.
ತಕ್ಷಣ ವಿಕ್ಟೋರಿಯ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಚೈತ್ರಾ ಮೂರ್ಛೆ ರೋಗದಿಂದ ಬಳಲುತ್ತಿದ್ದರೆನ್ನಲಾಗಿದೆ. ಇದೇ ಕಾರಣಕ್ಕೆ ಅವರು ಕುಸಿದಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಮುಖಂಡ, ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಂದ ಐದು ಕೋಟಿ ರೂ. ಪಡೆದು ವಂಚಿಸಿರುವ ಬಗ್ಗೆ ಚೈತ್ರಾ ಕುಂದಾಪುರ ಸಹಿತ ಏಳು ಮಂದಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಮೊದಲ ಆರೋಪಿ ಎಂದು ಗುರುತಿಸಲ್ಪಟ್ಟಿರುವ ಚೈತ್ರಾ ಕುಂದಾಪುರರನ್ನು ಮೂರನೇ ದಿನದ ವಿಚಾರಣೆಗಾಗಿ ಇಂದು ಬೆಳಗ್ಗೆ ಸಿಸಿಬಿ ಕಚೇರಿಗೆ ಕರೆತಂದ ವೇಳೆ ಅವರು ಏಕಾಏಕಿ ಕುಸಿದುಬಿದ್ದಿದ್ದಾರೆ.
ಪ್ರಕರಣದಲ್ಲಿ ಇನ್ನೂ ಹಲವರು ಜನ ಭಾಗಿಯಾಗಿದ್ದಾರೆಂಬ ಶಂಕೆ ಇದ್ದು ಕೆಲವರು ಭೂಗತರಾಗಿದ್ದಾರೆ. ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
You must be logged in to post a comment Login