Connect with us

KARNATAKA

5 ಕೋಟಿ ವಂಚನೆ ಪ್ರಕರಣ – ಜೈಲಿನಿಂದ ಬಿಡುಗಡೆಯಾದ ಚೈತ್ರಾ

ಬೆಂಗಳೂರು ಡಿಸೆಂಬರ್ 06 : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ 5 ಕೋಟಿ ಹಣ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚೈತ್ರಾ ಜಾಮೀನಿನ ಮೇಲೆ ಇಂದು ಬಿಡುಗಡೆಯಾಗಿದ್ದಾರೆ.


ಬರೋಬ್ಬರಿ 2 ತಿಂಗಳ ಬಳಿಕ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದಿದ್ದು, ಈ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದ ಶ್ರೀಕಾಂತ್ ಕೂಡಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.


ವಂಚನೆ ಪ್ರಕರಣದ ಎ1 ಚೈತ್ರಾ ಹಾಗೂ ಎ7 ಆರೋಪಿಗೆ 4ನೇ ತಾರೀಖಿನಂದು ಮೂರನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆರೋಪಿಗಳು ನ್ಯಾಯಾಲಯ ವಿಧಿಸಿದ್ದ ಷರತ್ತು ಪ್ರಕ್ರಿಯೆ ಪೂರ್ಣಗೊಳಿಸಲು ತಡವಾಗಿದ್ದರಿಂದ ಜಾಮೀನು ಮಂಜೂರಾಗಿ ಎರಡು ದಿನದ ಬಳಿಕ ಚೈತ್ರಾ ಹಾಗೂ ಶ್ರೀಕಾಂತ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *