Connect with us

KARNATAKA

ಚೈತ್ರಾ ಕುಂದಾಪುರಳ 3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಮತ್ತೆ ಪೋಲಿಸ್ ಕಸ್ಟಡಿಗೆ..!

Share Information

ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಳನ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ಬೆಂಗಳೂರು ಸೆಪ್ಟೆಂಬರ್ 18 : ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಳನ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ಸತತ ವೈದ್ಯಕೀಯ ತಪಾಸಣೆ ನಂತರ ಎಲ್ಲಾ ವರದಿಗಳು ನಾರ್ಮಲ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ಮುಂದುವರೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಚೈತ್ರಾಳ ತಲೆ ಹಾಗೂ ಮುಖಕ್ಕೆ ಮಾಸ್ಕ್‌ ಕಟ್ಟಿಸಿ ಆಸ್ಪತ್ರೆ ಹಿಂಬಾಗಿಲಿನಿಂದ ಪೊಲೀಸರು ಕರೆ ತಂದಿದ್ದಾರೆ.

ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು.

ಬಳಿಕ ಉಳಿದ ಆರೋಪಿಗಳನ್ನೂ ಚೈತ್ರಾಳ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು.

45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು.

ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು.

ಕೂಲಂಕೂಶವಾಗಿ ತಪಾಸಣೆ ನಡೆಸಿದಾಗ ಚೈತ್ರಾ ಸಾಬೂನು ತಂಡು ಬಾಯಿಗೆ ಹಾಕಿಕೊಂಡು ಇಷ್ಟೆಲ್ಲ ರಾದ್ದಾಂತ ಮಾಡಿಕೊಂಡಿದ್ದಳು ಎಂಬ ಮಾಹಿತಿನ್ನು ಆಸ್ಪತ್ರೆ ನೀಡಿತ್ತು.


Share Information
Advertisement
Click to comment

You must be logged in to post a comment Login

Leave a Reply