LATEST NEWS
ಕೋಮು ದ್ವೇಷ ಭಾಷಣ ಚಕ್ರವರ್ತಿ ಸೂಲಿಬೆಲೆ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ಮುಖಂಡರು

ಉಳ್ಳಾಲ ಮಾರ್ಚ್ 17: ಇತ್ತೀಚೆಗೆ ಮಂಗಳೂರಿನಲ್ಲಿ ಮಾಡಿದ ಭಾಷಣದಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಚಕ್ರವರ್ತಿ ಸೂಲಿಬೆಲೆ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ.
ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ ವಹಿಸಿದ್ದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಉಸ್ಮಾನ್ ಕಲ್ಲಾಪು, ಅಯ್ಯೂಬ್ ಮಂಚಿಲ, ದಿನೇಶ್ ಕುಂಪಲ, ರಶೀದ್ ಯೂಸುಫ್, ರಹ್ಮಾನ್ ಕೋಡಿಜಾಲ್, ಚಂದ್ರಿಕಾ ರೈ, ಸುರೇಖಾ ಚಂದ್ರಹಾಸ್, ಅಬ್ದುಲ್ ಜಬ್ಬಾರ್, ಮನ್ಸೂರ್ ಮಂಚಿಲ, ರಿಚಾರ್ಡ್, ಝಿಯಾದ್, ಜಬ್ಬಾರ್ ಮೇಲಂಗಡಿ, ನವನೀತ್ ಸುಂದರಿ ಬಾಗ್ ಮತ್ತಿತರರು ಉಪಸ್ಥಿತರಿದ್ದರು.
