Connect with us

LATEST NEWS

ಚಂಢೀಗಢ : ಬೀದಿ ನಾಯಿಗೆ ಅನ್ನ ಹಾಕುತ್ತಿದ್ದ ಯುವತಿ ಮೇಲೆ ಹರಿದ ಕಾರು…!!

ಚಂಡೀಗಢ: ಬೀದಿ ಬದಿಯಲ್ಲಿರುವ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಯ ಮೇಲೆ ಕಾರೊಂದು ಹರಿದ ಘಟನೆ ಚಂಡೀಗಢದಲ್ಲಿ ನಡೆದಿದೆ.ಅಪಘಾತದ ಬಳಿಕ ಕಾರಿನ ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದು, ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ.


ಗಾಯಗೊಂಡಿರುವ ಯುವತಿ ತೇಜಶ್ವಿತಾ ಎಂದು ಗುರುತಿಸಲಾಗಿದೆ. ತೇಜಶ್ವಿತಾ ಮತ್ತು ಆಕೆಯ ತಾಯಿ ಮಂಜಿದರ್ ಕೌರ್ ಫುಟ್‌ಪಾತ್‌ನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ಈ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ತೇಜಶ್ವಿತಾ ನಾಯಿಗೆ ಆಹಾರ ನೀಡುತ್ತಿರುವುದನ್ನು ಕಾಣಬಹುದು. ಮಹೀಂದ್ರ ಥಾರ್ SUV ಕಾರು ರಸ್ತೆಯಲ್ಲಿ ಬದಿಗೆ ಬರುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಎಸ್‌ಯುವಿ ಕಾರು ಯುವತಿಗೆ ಹೊಡೆದು ಹೋಗಿದೆ, ತೇಜಶ್ವಿತಾ ಅಲ್ಲಿಯೇ ನರಳುವುದು ಕೂಡ ವಿಡಿಯೊದಲ್ಲಿ ರೆಕಾರ್ಡ್ ಆಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *