Connect with us

    LATEST NEWS

    ಕೊಲ್ಲೂರು ದೇವಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪ ಹೆಸರಿನಲ್ಲಿ ಚಂಡಿಕಾಹೋಮ

    ಕೊಲ್ಲೂರು ದೇವಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪ ಹೆಸರಿನಲ್ಲಿ ಚಂಡಿಕಾಹೋಮ

    ಉಡುಪಿ ಅಕ್ಟೋಬರ್ 10: ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ದೇವಸ್ಥಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರ ಹೆಸರಿನಲ್ಲಿ ಚಂಡಿಕಾಹೋಮ ನಡೆಸಲಾಯಿತು. ಇಂದು ನಡೆದ ಯಾಗದ ಪೂರ್ಣಾಹುತಿಯಲ್ಲಿ ಬಿಎಸ್​ವೈ ಅವರ ಪುತ್ರ ಬಿ.ವೈ. ರಾಘವೇಂದ್ರ, ಪತ್ನಿ ತೇಜಸ್ವಿನಿ, ಬಿಎಸ್​ವೈ ಪುತ್ರಿ ಅರುಣಾ ದೇವಿ ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಬೈಂದೂರು ಶಾಸಕ ಸುಕುಮಾರ್​ ಶೆಟ್ಟಿ ಅವರು ರಾಘವೇಂದ್ರ ಅವರಿಗೆ ಸಾಥ್​ ನೀಡಿದರು.

    ಈಗಾಗಲೇ ಲೋಕಸಭಾ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ರಾಘವೇಂದ್ರ ಅವರು ಮೂಕಾಂಬಿಕೆಯ ದರ್ಶನ ಪಡೆದರು. ರಾಘವೇಂದ್ರ ಅವರು ಅಭ್ಯರ್ಥಿಯಾಗಿ ಘೋಷಣೆಯಾಗಿದ್ದರಿಂದ ವಿಶೇಷ ಪೂಜೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply