Connect with us

FILM

ಗಿಚ್ಚಗಿಲಿಗಿಲಿ ಕಲಾವಿದ ಚಂದ್ರಪ್ರಭ ಮೇಲೆ ಎಫ್ಐಆರ್…!!

Share Information

ಚಿಕ್ಕಮಗಳೂರು ಸೆಪ್ಟೆಂಬರ್ 7 : ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಗಿಚ್ಚಗಿಲಿಗಿಲಿಯ ಕಲಾವಿದ ಚಂದ್ರಪ್ರಭ ಅವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.


ಚಿಕ್ಕಮಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಮಂಗಳವಾರ ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದು ನಿಲ್ಲಿಸದೇ ಪರಾರಿಯಾಗಿದ್ದರು ಎಂದ ಆರೋಪಿಸಲಾಗಿದ್ದು, ಈ ಘಟನೆಯಲ್ಲಿ ಬೈಕ್ ಸವಾರ ಚಿಕ್ಕಮಗಳೂರು ತಾಲ್ಲೂಕಿನ ನಾಗೇನಹಳ್ಳಿ ನಿವಾಸಿ ಮಲತೇಶ್‌ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್‌ಗೆ ಕಾರು ತಗುಲಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಠಾಣೆಗೆ ಬರುವಂತೆ ಚಂದ್ರಪ್ರಭಗೆ ಪೊಲೀಸರು ತಿಳಿಸಿದ್ದು, ಗುರುವಾರ ಠಾಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಚಂದ್ರಪ್ರಭ, ‘ನಾನೇ ಕಾರು ಚಾಲನೆ ಮಾಡುತ್ತಿದ್ದೆ. ಕಾರಿನ ಎಡಭಾಗಕ್ಕೆ ಬೈಕ್ ತಗುಲಿತು. ಇಳಿದು ನೋಡಿದಾಗ ಸವಾರ ಬಿದ್ದಿದ್ದರು. ಅವರನ್ನು ಸ್ನೇಹಿತನ ಆಟೊರಿಕ್ಷಾದಲ್ಲಿ ಆಸ್ಪತ್ರೆಗೆ ಕಳುಹಿಸಿದೆವು. ಪೊಲೀಸರು ಮತ್ತು ನಾವು ಎತ್ತಿಕೊಂಡಾಗ ಅವರು ಪಾನಮತ್ತರಾಗಿರುವುದು ಗೊತ್ತಾಯಿತು. ಸ್ಥಳದಲ್ಲಿ ಇದ್ದವರು ನಿಮ್ಮ ತಪ್ಪಿಲ್ಲ ಎಂದು ಹೋಗಿ ಎಂದು ಹೇಳಿದರು. ಚಿತ್ರೀಕರಣಕ್ಕೆ ಹೋಗಲೇಬೇಕಿದ್ದ ಕಾರಣ ಹೊರಟೆ’ ಎಂದು ಹೇಳಿದ್ದಾರೆ. ‘ಪೊಲೀಸರು ಕರೆ ಮಾಡಿ ಠಾಣೆಗೆ ಬರಲು ತಿಳಿಸಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಹೇಳಿದಂತೆ ಕೇಳುತ್ತೇನೆ. ಕಾರು ನಿಲ್ಲಿಸದೆ ಪರಾರಿಯಾಗಿರುವುದಾಗಿ ಸುಳ್ಳು ಹರಡಬಾರದು’ ಎಂದು ಮನವಿ ಮಾಡಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply