Connect with us

    BELTHANGADI

    ಚಾರ್ಮಾಡಿ ಘಾಟ್ – ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ

    ಬೆಳ್ತಂಗಡಿ ಅಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.


    ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಈ ಘಟನೆ ನಡೆದಿದ್ದು, ವಿಷ ಸೇವಿಸಿದ ಪರಿಣಾಮ ವ್ಯಕ್ತಿಯೊಬ್ಬ ಕಾರಿನಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. KA-05-MT-4877 ನಂಬರ್ ನ ಕ್ವಿಡ್ ಕಾರು ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿ ನಿಂತಿದ್ದು, ಅದೇ ಕಾರಿನಲ್ಲಿ ವಿಷ ಸೇವಿಸಿದ್ದಾನೆ ಎನ್ನಲಾಗಿದೆ.

    ಕಾರಿನಲ್ಲಿ ಮೃತ ಪಟ್ಟ ವ್ಯಕ್ತಿಯ ಆಧಾರ್ ಕಾರ್ಡ್ ದೊರಕಿದ್ದು ಅದರಲ್ಲಿ ನಾಗರಾಜು. ಬಿನ್ ರಾಮಣ್ಣ 44 ವರ್ಷ, ವಾಸ ಹೊರಕೆರೆ ದೇವರಪುರ ಗ್ರಾಮ, ಹೊಳಲ್ಕೆರೆ ತಾಲೂಕು, ಚಿತ್ರದುರ್ಗ ಜಿಲ್ಲೆ ಎಂದು ಹೇಳಲಾಗಿದೆ. ಕಾರಿನ ಪಕ್ಕದ ರಸ್ತೆಯಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply