Connect with us

    BELTHANGADI

    ಚಾರ್ಮಾಡಿ – ಕೆಎಸ್ ಆರ್ ಟಿಸಿ ಡೈವರ್ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್

    ಬೆಳ್ತಂಗಡಿ, ಮಾರ್ಚ್ 8: ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 70 ಪ್ರಯಾಣಿಕರ ಜೀವವನ್ನು ಉಳಿಸಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.


    ಶುಕ್ರವಾರ ಬೆಳಗ್ಗೆ ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಈ ಕೆಎಸ್ಸಾರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದೆ. ಇದನ್ನು ಅರಿತ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ರಸ್ತೆಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲುವಂತೆ ಮಾಡಿದ್ದಾನೆ .

    ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ಸಿನಲ್ಲಿದ್ದ  ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಅತ್ಯಂತ ಅಪಾಯಕಾರಿ ತಿರುವುಗಳಿಂದ ಕೂಡಿರುವ ಚಾರ್ಮಾಡಿ ಘಾಟಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಚಾಲಕ ತೋರಿದ ಸಮಯಪ್ರಜ್ಞೆ ಪ್ರಯಾಣಿಕರ ಜೀವ ಉಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply