Connect with us

KARNATAKA

ಚಾರ್ಮಾಡಿಘಾಟ್ ನಲ್ಲಿ ಬೈಕ್ ಮೇಲೆ ಬಿದ್ದ ಮರ- ಸವಾರ ಸಾವು

ಚಿಕ್ಕಮಗಳೂರು ನವೆಂಬರ್ 07: ಬೈಕ್‍ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿರುವಾಗ ಬೈಕ್ ಮೇಲೆ ಮರ ಬಿದ್ದು ಯಾತಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಿಕ್ಕಮಾಲೂರು ಮೂಲದ ಜೀವನ್ (21) ಎಂದು ಗುರುತಿಸಲಾಗಿದೆ.


ಜೀವನ್ ತನ್ನ ಸ್ನೇಹಿತರ ಜೊತೆ ರಾಮನಗರದಿಂದ ಧರ್ಮಸ್ಥಳಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದ ಹದಿನೈದು ದಿನದಿಂದ ಸಂಜೆ ವೇಳೆ ಭಾರೀ ಮಳೆ ಸುರಿಯುತ್ತಿದೆ. ಇಡೀ ರಾತ್ರಿ ಧಾರಾಕಾರವಾಗಿ ಸುರಿಯುವ ಮಳೆ ಹಗಲಲ್ಲಿ ಬಿಡುವು ನೀಡುತ್ತಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್ ಭಾಗದಲ್ಲಿ ಯತೇಚ್ಛವಾಗಿ ಮಳೆ ಸುರಿಯುತ್ತಿದ್ದು ಮಳೆಯಲ್ಲೇ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಬೈಕ್ ಮೇಲೆ ಮರ ಬಿದ್ದು ಸಾವನ್ನಪ್ಪಿದ್ದಾನೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *