LATEST NEWS
ಛತ್ತಿಸ್ಗಢ: ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
ನಾರಾಯಣ್ಪುರ, ಫೆಬ್ರವರಿ 11: ಛತ್ತೀಸ್ಗಢದ ನಾರಾಯಣ್ಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದವರನ್ನು ಬಿಜೆಪಿಯ ನಾರಾಯಣ್ಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಎಂದು ಗುರುತಿಸಲಾಗಿದೆ. ಈ ಕೃತ್ಯದ ಹಿಂದೆ ನಕ್ಸಲರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಛೋಟೆಡೊಂಗರ್ ಗ್ರಾಮದಲ್ಲಿ ತಮ್ಮ ಮನೆಯಲ್ಲಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಇಬ್ಬರು ದಾಳಿಕೋರರು ಕುಟುಂಬ ಸದಸ್ಯರ ಎದುರುಗಡೆಯೇ ಸಾಹು ಮೇಲೆ ಗುಂಡು ಹಾರಿಸಿದ್ದಾರೆ.
ತಕ್ಷಣ ಅವರನ್ನು ನಾರಾಯಣ್ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಮೃತಪಟ್ಟಿದ್ದಾರೆ. ಈ ಕೃತ್ಯದಲ್ಲಿ ನಕ್ಸಲರ ಕೈವಾಡ ಇದೆ ಎಂದು ಮೇಲ್ನೋಟಕ್ಕೆ ತಿಳಿದು ಬರುತ್ತಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬಿಜಾಪುರ ಜಿಲ್ಲೆಯಲ್ಲಿ ಬಿಜೆಪಿ ಅವಪಳ್ಳಿ ಮಂಡಲ ಘಟಕದ ಅಧ್ಯಕ್ಷ ನೀಲಕಂಠ ಕಾಕೆಮ್ (40) ನಕ್ಸಲರಿಂದ ಕೊಲೆಗೀಡಾಗಿದ್ದರು.
You must be logged in to post a comment Login