Connect with us

    LATEST NEWS

    ತಿರುಪತಿ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು, ಇಲ್ಲಿ ಓಂ ನಮೋ ವೆಂಕಟೇಶಾಯ ಘೋಷಣೆ ಮಾತ್ರ- ಚಂದ್ರಬಾಬು ನಾಯ್ದು

    ತಿರುಪತಿ ಜೂನ್ 13 : ತಿರುಪತಿ ತಿರುಮಲ ದೇವಸ್ಥಾನ ಕೇವಲ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು ಎಂದು ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ-ತಿರುಮಲ ದೇಗುಲಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದ ಚಂದ್ರಬಾಬು ನಾಯ್ಡು ಅವರು ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು.


    ದರ್ಶನದ ಬಳಿಕ ದೇಗುಲದ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಬಾಬು ನಾಯ್ಡು ಅವರು, ಶ್ರೀ ವೆಂಕಟೇಶ್ವರಸ್ವಾಮಿಯ ಆಶೀರ್ವಾದದಿಂದ ನಾನು ಮತ್ತೆ ಸಿಎಂ ಆಗಿದ್ದೇನೆ. ಈ ಹಿಂದಿನ ಸರ್ಕಾರದಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅನಾಚಾರಗಳು ನಡೆದಿವೆ. ನಮ್ಮ ಸರ್ಕಾರದ ಶುದ್ಧೀಕರಣ ಕಾರ್ಯ ಇಲ್ಲಿಂದಲೇ ಆರಂಭಿಸುತ್ತೇವೆ. ಇನ್ನು ಮುಂದೆ ನಾಯಕರು ಬಂದಾಗ ನೇತಾಡುವ ಪರದೆಗಳು ಮತ್ತು ಮರಗಳು ಇರುವುದಿಲ್ಲ. ತಿರುಮಲದಲ್ಲಿ ಗಾಂಜಾ, ಮದ್ಯ ಮುಕ್ತವಾಗಿ ಸಿಗುವಂತೆ ಮಾಡಲಾಗಿತ್ತು. ಇವುಗಳೆಲ್ಲವನ್ನೂ ಇದೀಗ ನಾವು ನಿರ್ಮೂಲನೆ ಮಾಡುತ್ತೇವೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply