Connect with us

LATEST NEWS

ಕಾಫಿನಾಡು ಚಿಕ್ಕಮಗಳೂರು ಜನತೆಗೆ ಗುಡ್ ನ್ಯೂಸ್ – ಚಿಕ್ಕಮಗಳೂರಿನಿಂದ ನಿಂದ ತಿರುಪತಿಗೆ ರೈಲು

ಚಿಕ್ಕಮಗಳೂರು ಜೂನ್ 28: ಕಾಫಿನಾಡು ಚಿಕ್ಕಮಗಳೂರು ಜನತೆಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು ಮೂಲಕ ತಿರುಪತಿಗೆ ರೈಲು ಪ್ರಾರಂಭವಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರೈಲಿನ ವಿವರ

ತಿರುಪತಿ ಟು ಚಿಕ್ಕಮಗಳೂರು (ರೈಲು ಸಂಖ್ಯೆ 17423): ಈ ರೈಲು ಪ್ರತಿ ಗುರುವಾರ ರಾತ್ರಿ 09 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು, ಮರುದಿನ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ.

ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424): ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು, ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.
ನಿಲ್ದಾಣಗಳು ಹೀಗಿವೆ


ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್‌ಫೀಲ್ಡ್, ಕೆ ಆರ್ ಪುರಂ, ಎಸ್‌ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ.

ಇನ್ನು ಈ ಬಗ್ಗೆ ಚಿಕ್ಕಮಗಳೂರು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತಸ ಹಂಚಿಕೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ಸಂತಸದ ಸುದ್ಧಿಯನ್ನು ಘೋಷಿಸಲು ಹರ್ಷಿಸುತ್ತಿದ್ದೇನೆ. ಸಂಸದನಾದ ಬಳಿಕ ನನಗಿದ್ದ ಬಹುದೊಡ್ಡ ಕನಸುಗಳಲ್ಲೊಂದಾದ ಚಿಕ್ಕಮಗಳೂರಿನಿಂದ ರಾಜ್ಯದ ರಾಜಧಾನಿ ಬೆಂಗಳೂರಿನ ಮೂಲಕ ಹಿಂದೂಗಳ ಶ್ರದ್ಧಾಕೇಂದ್ರ ತಿರುಪತಿಗೆ ತಲುಪಿಸುವ ರೈಲೊಂದು ಬೇಕೆಂಬ ಬೇಡಿಕೆಯು ಈಗ ಈಡೇರಿದ್ದು ಕೇಂದ್ರ ಸಚಿವರಾದ ಮಾನ್ಯ ಸೋಮಣ್ಣರವರ ಬೆಂಬಲದೊಂದಿಗೆ ಕೇಂದ್ರ ರೈಲ್ವೆ ಸಚಿವರಾದ ಗೌರವಾನ್ವಿತ ಶ್ರೀ ಅಶ್ವಿನಿ ವೈಷ್ಣವ್ ರವರು ಚಿಕ್ಕಮಗಳೂರು-ಬೆಂಗಳೂರು-ತಿರುಪತಿ ಎಕ್ಸ್ಪ್ರೆಸ್ ರೈಲಿಗೆ ಆದೇಶ ಹೊರಡಿಸಿದ್ದಾರೆ.

ಸದ್ಯ ಈ ರೈಲು ವಾರಕ್ಕೊಂದು ಬಾರಿ ಪ್ರಯಾಣ ಬೆಳೆಸಲಿದ್ದು ಪ್ರಯಾಣಿಕರ ಬೇಡಿಕೆಯ ಮೇರೆಗೆ ನಂತರದ ದಿನಗಳಲ್ಲಿ ಈ ರೈಲನ್ನು ವಾರಕ್ಕೆ ಮೂರು ದಿನ ಓಡಿಸುವ ಯೋಜನೆಯೂ ಸಿದ್ಧವಾಗಿದೆ.
ಸಂಸದನಾಗಿ ಆಯ್ಕೆಯಾದ ನೂರು ದಿನದಲ್ಲಿ ಉಡುಪಿಯಿಂದ ತಿರುಪತಿಗೆ ರೈಲು ಹೊರಡಿಸಿದ ತೃಪ್ತಿಯ ನಡುವೆ ಒಂದು ವರ್ಷದಲ್ಲಿ ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಹೊರಡಿಸಿದ ಸಂತಸವಿದೆ.
ಇದು ಚಿಕ್ಕಮಗಳೂರು ಜಿಲ್ಲೆಯ ಜನತೆಯ ಅನೇಕ ವರ್ಷಗಳ ಬೇಡಿಕೆ. ಈ ಬೇಡಿಕೆ ಈಡೇರಿಕೆಗೆ ನನ್ನ ಜೊತೆಗೆ ಸಹಕರಿಸಿದ ಭಾರತೀಯ ರೈಲ್ವೆ, ವಿಶೇಷವಾಗಿ ನೈಋತ್ಯ ರೈಲ್ವೆ ಹುಬ್ಬಳ್ಳಿಯ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜೊತೆಗೆ ಈ ರೈಲನ್ನು ಚಿಕ್ಕಮಗಳೂರು ಜಿಲ್ಲೆಯ ಜನತೆ ಬಳಸಿಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *